Hosing Subsidy: ಡಾ. ಬಿ. ಆರ್. ಅಂಬೇಡ್ಕರ್ ನಿವಾಸ ಯೋಜನೆ – ಬಡವರಿಗೆ ಸ್ವಂತ ಮನೆ ನಿರ್ಮಾಣ ಮಾಡಲು 2 ಲಕ್ಷದವರೆಗೆ ಸಹಾಯಧನ ಸಿಗುತ್ತೆ.! ಇಂದೇ ಅರ್ಜಿ ಸಲ್ಲಿಸಿ
ನಮಸ್ಕಾರ ಗೆಳೆಯರೇ ಬಡ ಜನರಿಗೆ ರಾಜ್ಯ ಸರ್ಕಾರ ಕಡೆಯಿಂದ ಇದೀಗ ಡಾಕ್ಟರ್ ಬಿ ಆರ್ ಅಂಬೇಡ್ಕರ್ ವಸತಿ ಯೋಜನೆ ಅಡಿಯಲ್ಲಿ ಸ್ವಂತ ಮನೆ ನಿರ್ಮಾಣ ಮಾಡಲು ಸರಕಾರದಿಂದ ಬರೋಬ್ಬರಿ ಎರಡು ಲಕ್ಷ ರೂಪಾಯಿವರೆಗೆ ಸಹಾಯಧನ ಅಥವಾ ಆರ್ಥಿಕ ನೆರವು ನೀಡಲಾಗುತ್ತಿದೆ.
ಹಾಗಾಗಿ ನಿಮಗೆ ಸ್ವಂತ ಮನೆ ಕಟ್ಟಿಸಿಕೊಳ್ಳಲು ಆಸಕ್ತಿ ಇದೆಯಾ ಹಾಗಾದರೆ ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಮನೆ ನಿರ್ಮಾಣಕ್ಕೆ ಸರಕಾರದಿಂದ ಎರಡು ಲಕ್ಷ ರೂಪಾಯಿವರೆಗೆ ಸಹಾಯಧನ ಪಡೆಯಬಹುದು.
ನಾವು ಈ ಒಂದು ಲೇಖನೆಯ ಮೂಲಕ ಈ ಒಂದು ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಯಾರು ಅರ್ಹತೆ ಹೊಂದಿರುತ್ತಾರೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನೆಯನ್ನು ಆದಷ್ಟು ಶೇರ್ ಮಾಡಿ

ಡಾಕ್ಟರ್ ಬಿ ಆರ್ ಅಂಬೇಡ್ಕರ್ ವಸತಿ ಯೋಜನೆ ಅಂದರೆ ಏನು..?
ಸ್ನೇಹಿತರ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಡ ಜನರಿಗೆ ಮನೆ ನಿರ್ಮಾಣ ಮಾಡುವ ಉದ್ದೇಶದಿಂದ ವಿವಿಧ ವಸತಿ ಯೋಜನೆಗಳನ್ನು ಜಾರಿಗೆ ತಂದಿದೆ ಆ ವಸತಿ ಯೋಜನೆಗಳ ಬಯಕೆ ರಾಜ್ಯ ಸರ್ಕಾರ ಡಾ. ಬಿ.ಆರ್ ಅಂಬೇಡ್ಕರ್ ನಿವಾಸ ಯೋಜನೆಯ ಅಡಿಯಲ್ಲಿ ರಾಜ್ಯದ ಜನತೆಗೆ ಇದೀಗ ಉಚಿತವಾಗಿ ಮನೆ ಪಡೆಯಲು ಅಥವಾ ಮನೆ ನಿರ್ಮಾಣಕ್ಕೆ ಎರಡು ಲಕ್ಷ ರೂಪಾಯಿವರೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ ಮಾಡಲಾಗಿದೆ.
ಹೌದು ಸ್ನೇಹಿತರೆ ಈ ಒಂದು ವಸತಿ ಯೋಜನೆಗೆ ಬಡವರು ಮಾತ್ರ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ ಹಾಗಾಗಿ ನಾವು ಈ ಲೇಖನಿಯಲ್ಲಿ ಈ ವಸತಿ ಯೋಜನೆಗೆ ಯಾರು ಅರ್ಜಿ ಸಲ್ಲಿಕೆ ಮಾಡಬಹುದು ಮತ್ತು ಅರ್ಜಿ ಸಲ್ಲಿಕೆ ಮಾಡಲು ಬೇಕಾಗುವ ದಾಖಲಾತಿಗಳು ಮತ್ತು ಯಾವ ರೀತಿ ಅರ್ಜಿ ಸಲ್ಲಿಕೆ ಮಾಡಬಹುದು ಎಂಬ ಮಾಹಿತಿ ತಿಳಿಸಿಕೊಡುತ್ತೇವೆ.
ಡಾ. ಬಿ. ಆರ್ ಅಂಬೇಡ್ಕರ್ ವಸತಿ ಯೋಜನೆಯ ವಿವರಗಳು.?
ಸ್ನೇಹಿತರೆ ಡಾಕ್ಟರ್ ಬಿಆರ್ ಅಂಬೇಡ್ಕರ್ ವಸತಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ವಸತಿ ರಹಿತ ನಾಗರಿಕರಿಗೆ ಸ್ವಂತ ಮನೆ ಕಟ್ಟಿಸುವ ಉದ್ದೇಶದಿಂದ 2015 ಮತ್ತು 16ನೇ ಸಾಲಿನಲ್ಲಿ ಡಾಕ್ಟರ್. ಬಿ. ಆರ್ ಅಂಬೇಡ್ಕರ್ ನಿವಾಸ ಯೋಜನೆ ಜಾರಿಗೆ ತರಲಾಗಿದೆ.
ಈ ವಸತಿ ಯೋಜನೆ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಅನುಷ್ಠಾನ ಮಾಡಲಾಗಿದ್ದು ನಗರ ಪ್ರದೇಶದ ಫಲಾನುಭವಿಗಳು ಮತ್ತು ಹಳ್ಳಿಗಳಲ್ಲಿ ವಾಸ ಮಾಡುವಂಥ ಫಲಾನುಭವಿಗಳು ಈ ಒಂದು ಯೋಜನೆಯ ಲಾಭ ಪಡೆಯಬಹುದು
ಡಾ. ಬಿ.ಆರ್ ಅಂಬೇಡ್ಕರ್ ವಸತಿ ಯೋಜನೆಯ ಸಬ್ಸಿಡಿ ಎಷ್ಟು ಸಿಗುತ್ತೆ.?
ಸ್ನೇಹಿತರೆ ಡಾಕ್ಟರ್ ಬಿಆರ್ ಅಂಬೇಡ್ಕರ್ ವಸತಿ ಯೋಜನೆ ಅಡಿಯಲ್ಲಿ ನೀವೇನಾದರೂ ಅರ್ಜಿ ಸಲ್ಲಿಕೆ ಮಾಡಿದರೆ ಈ ಒಂದು ಯೋಜನೆ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಗ್ರಾಮೀಣ ಪ್ರದೇಶದವರು ಆಗಿದ್ದರೆ ಅಂತವರಿಗೆ 1.75 ಲಕ್ಷದವರೆಗೆ ಈ ಒಂದು ಯೋಜನೆಯ ಮೂಲಕ ಸಹಾಯಧನ ಸಿಗುತ್ತದೆ.
ಅದೇ ರೀತಿ ನಗರ ಪ್ರದೇಶದಲ್ಲಿ ವಾಸ ಮಾಡುವ ಫಲಾನುಭವಿಗಳಿಗೆ ಎರಡು ಲಕ್ಷ ರೂಪಾಯಿವರೆಗೆ ಸಹಾಯಧನ ಸಿಗುತ್ತದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾರು ಅರ್ಹತೆ ಹೊಂದಿರುತ್ತಾರೆ.?
- ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು
- ಅರ್ಜಿದಾರರು ತಮ್ಮ ಹೆಸರಿನಲ್ಲಿ ಯಾವುದೇ ರೀತಿ ಮನೆ ಹೊಂದಿರಬಾರದು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಜನರು ಮಾತ್ರ ಈ ಒಂದು ಯೋಜನೆಯಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು
- ಅರ್ಜಿದಾರ ವಾರ್ಷಿಕ ಆದಾಯವು ಅತ್ಯಂತ ಕಡಿಮೆಯಾಗಿರಬೇಕು ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದವರು ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿದೆ
- ಅರ್ಜಿದಾರರು ಈ ಹಿಂದೆ ಯಾವುದೇ ರೀತಿ ವಸತಿ ಯೋಜನೆ ಅಡಿಯಲ್ಲಿ ಆರ್ಥಿಕ ನೆರವು ಪಡೆದಿರಬಾರದು
- ಅರ್ಜಿದಾರರು ಮನೆ ನಿರ್ಮಾಣಕ್ಕಾಗಿ ಕಡ್ಡಾಯವಾಗಿ ಖಾಲಿ ಜಾಗ ಹೊಂದಿರಬೇಕು
ಡಾ.ಬಿ.ಆರ್ ಅಂಬೇಡ್ಕರ್ ವಸತಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ.?
ಈ ಒಂದು ಯೋಜನೆಗೆ ನೀವು ಅರ್ಜಿ ಸಲ್ಲಿಕೆ ಮಾಡಲು ಬಯಸುತ್ತಿದ್ದರೆ ಎಲ್ಲಾ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಯಾವುದೇ ರೀತಿ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು ಅಥವಾ ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://ashraya.karnataka.gov.in/nannamane/Nanna_Mane.aspx
ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಬೇಕೆ ಹಾಗಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡುವುದರ ಮೂಲಕ ಪ್ರತಿಯೊಂದು ವಿಷಯಗಳ ಬಗ್ಗೆ ಮಾಹಿತಿ ತಿಳಿಯಬಹುದು
New Ration Card Application: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಕ್ರಿಯೆ ಆರಂಭ.! ಅರ್ಜಿ ಸಲ್ಲಿಸುವುದು ಹೇಗೆ.?